ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ರಾಜ್ಯದ ತೆರಿಗೆ ಹಂಚಿಕೆ ವಿಚಾರದಲ್ಲಿ ಅನವಶ್ಯಕವಾಗಿ ಸುಳ್ಳು ಹೇಳುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆರ್ಥಿಕ ತೊಂದರೆ ಆಗಿದ್ದರಿಂದ, ಕೇಂದ್ರ ಸರ್ಕಾರಕ್ಕೆ ಹೆಚ್ಚುವರಿ ಹಣ ಕೇಳುತ್ತಿದ್ದಾರೆ ಎಂಬ ನಿರ್ಮಲಾ ಅವರ ಆರೋಪ ಶುದ್ಧ ಸುಳ್ಳು’ ಎಂದು ತಿಳಿಸಿದರು.