ಶಹಜಹಾನ್ಪುರ: ಉತ್ತರ ಪ್ರದೇಶದ ಶಹಜಹಾನ್ಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಸಮಾಜವಾದಿ ಪಕ್ಷವು (ಎಸ್ಪಿ) ಬದಲಿಸಿದೆ.
ರಾಜೇಶ್ ಕಶ್ಯಪ್ ಅವರ ಬದಲಿಗೆ ಜ್ಯೋತ್ಸ್ನಾ ಗೊಂಡ ಅವರಿಗೆ ಈ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.
ರಾಜೇಶ್ ಕಶ್ಯಪ್ ಅವರು ಏಪ್ರಿಲ್ 22 ರಂದು ನಾಮಪತ್ರ ಸಲ್ಲಿಸಿದ್ದರು. ಅವರ ನಾಮಪತ್ರ ತಿರಸ್ಕೃತಗೊಂಡ ಕಾರಣ ಜ್ಯೋತ್ಸ್ನಾ ಅವರು ಏಪ್ರಿಲ್ 24 ರಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ತಿಳಿಸಿದರು. ಶಹಜಹಾನ್ಪುರ ಕ್ಷೇತ್ರಕ್ಕೆ ಮೇ 13ರಂದು ಮತದಾನ ನಡೆಯಲಿದೆ.