ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್–ಬಿಜೆಪಿ ಪಕ್ಷದ ಮೈತ್ರಿ ಅಭ್ಯರ್ಥಿಯ ಚುನಾವಣೆ ಏಜೆಂಟ್ ಆಗಿರುವ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ಅವರು ವಿಡಿಯೊ ಮಾರ್ಫಿಂಗ್ ಬಗ್ಗೆ ಏಪ್ರಿಲ್ 23ರಂದು ದೂರು ನೀಡಿದ್ದರು. ಪ್ರಜ್ವಲ್ ಕಾರಿನ ಚಾಲಕನಾಗಿದ್ದ ಹೊಳೆನರಸೀಪುರ ತಾಲ್ಲೂಕಿನ ಕಡವಿನ ಕೋಟೆಯ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್ ಗೌಡ ಹಾಗೂ ಚೇತನ್ ಗೌಡ ವಿರುದ್ಧ ಎಫ್ಐಆರ್ ಸಹ ದಾಖಲಾಗಿತ್ತು.