ಮಂಗಳವಾರ , ನವೆಂಬರ್ 10, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಜೀವನ ಒಂದು ಕಲೆ, ಅದು ಎಲ್ಲಾ ಕಲೆಗಳಿಗಿಂತಲೂ ಹಿರಿದಾದುದು.
-- ಗಾಂಧೀಜಿ
ಪುರವಣಿ
ಮೆಟ್ರೊ ಮಂಗಳವಾರ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಕರ್ನಾಟಕ ದರ್ಶನ
ಯುವಜನ
ಸಾಪ್ತಾಹಿಕ ಪುರವಣಿ
ಆರೋಗ್ಯ
ಭೂಮಿಕಾ
ಸಿನಿಮಾ- ಕಿರುತೆರೆ ರಂಜನೆ
ವಿಮರ್ಶೆ
ಪುಸ್ತಕ ವಿಮರ್ಶೆ
ಚಿತ್ರ ವಿಮರ್ಶೆ
ಕೃಷಿ
ತಂತ್ರಜ್ಞಾನ
ವಾಣಿಜ್ಯ ಪುರವಣಿ
ಮೆಟ್ರೊ ಗುರುವಾರ
ಮೆಟ್ರೊ ಶನಿವಾರ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಜ್ಯ
ಸರ್ಕಾರದ ವಿರುದ್ಧ ಸಮರ: 15 ದಿನ ಗಡುವು
‘ಮುಂದಿನ ಹದಿನೈದು ದಿನಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಚುರುಕುಗೊಳ್ಳದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಎಚ್ಚರಿಕೆ ನೀಡಿದರು.


ಬೆಂಗಳೂರು :  ನಗರದಲ್ಲಿ ಸೋಮವಾರ ನಡೆದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರದ ವೈಫಲ್ಯ ಮುಂದುವರಿದರೆ ನಮ್ಮ ಕಾರ್ಯಕರ್ತರು ನೆರೆಪೀಡಿತ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ ಪರಿಹಾರ ಕಾರ್ಯದ ಮೇಲೆ ನಿಗಾ ವಹಿಸಬೇಕು’ ಎಂದು ಸೂಚಿಸಿದರು. ‘ಕಾಂಗ್ರೆಸ್ ಒಂದು ಸಮರ್ಥ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಆ ಪಕ್ಷದ ಮುಖಂಡರು ಬಿಜೆಪಿ ನಾಯಕರ ಜೊತೆ ನಿಕಟ ಬಾಂಧವ್ಯ ಹೊಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೂ ಕಾಂಗ್ರೆಸ್ ಪಕ್ಷವೇ ಹೊಣೆ’ ಎಂದು ಟೀಕಿಸಿದರು.

‘ನನ್ನ ಹಿರಿಯಣ್ಣ’: ‘ಸಿಂಧ್ಯ ಅವರು ನನ್ನ ಹಿರಿಯಣ್ಣನಿದ್ದಂತೆ. ಅವರು ಪಕ್ಷವನ್ನು ಕಟ್ಟುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು. ಕಾರಣಾಂತರಗಳಿಂದ ನಾವು ದೂರವಾಗಿದ್ದೆವು. ಆದರೆ ಭವಿಷ್ಯದ ದಿನಗಳಲ್ಲಿ ಇಂತಹ ಸಮಸ್ಯೆ ಸೃಷ್ಟಿಯಾಗುವುದಿಲ್ಲ. ಒಂದೇ ಕುಟುಂಬದ ಸದಸ್ಯರಂತೆ ಮುನ್ನಡೆಯುತ್ತೇವೆ’ ಎಂದು ಕುಮಾರಸ್ವಾಮಿ ಹೇಳಿದರು.
ನೋವಿನ ರಾಜಕಾರಣ ಗೊತ್ತು:

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಾತನಾಡಿ, ‘ನಮ್ಮ ಕುಟುಂಬಕ್ಕೆ ಸೇಡಿನ ರಾಜಕಾರಣ ಗೊತ್ತಿಲ್ಲ. ನೋವಿನ ರಾಜಕಾರಣ ಮಾತ್ರ ಗೊತ್ತು.

click here
ನಾವು ಜನರಿಗಾಗಿಯೇ ಸವಾಲು ಸ್ವೀಕರಿಸುತ್ತೇವೆ. ಈ ಕಾರಣಕ್ಕಾಗಿಯೇ ಪದೇ ಪದೇ ನೋವು ಅನುಭವಿಸಿದ್ದೇವೆ’ ಎಂದರು.

‘ಸಿಂಧ್ಯ, ಕುಮಾರಸ್ವಾಮಿ ಮತ್ತು ಎಚ್.ಡಿ. ರೇವಣ್ಣ ಅವರ ನಡುವೆ ಭಿನ್ನಾಭಿಪ್ರಾಯ ಮೂಡಲು ನಾನು ಬದುಕಿರುವವರೆಗೆ ಬಿಡುವುದಿಲ್ಲ. ಅವರೆಲ್ಲ ಒಗ್ಗೂಡಿ ವಿಧಾನಸೌಧದ ಎದುರು ಮತ್ತೆ ಅಧಿಕಾರ ಸ್ವೀಕರಿಸುವುದನ್ನು ನೋಡಬೇಕು ಎಂಬುದು ನನ್ನ ಮಹದಾಸೆ’ ಎಂದು ಇಂಗಿತ ವ್ಯಕ್ತಪಡಿಸಿದರು.

‘ಕ್ಯಾಪ್ಟನ್ ಆಗಲ್ಲ’: ‘ನಾನು ಯಾವುದೇ ಅಧಿಕಾರದ ಹಪಹಪಿಯಿಂದ ಜೆಡಿಎಸ್‌ಗೆ ಮರಳಿಲ್ಲ. ಪಕ್ಷದ ನಾಯಕತ್ವವೂ ಬೇಡ. ಕುಮಾರಸ್ವಾಮಿ ಅವರೇ ರಾಜ್ಯ ಘಟಕದ ನಾಯಕರು’ ಎಂದರು.

ಇತರ ಸುದ್ದಿಗಳು
ಬಿಜೆಪಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ: ಸಿಎಂ
ಒಪ್ಪಂದ ವಿವರ ಬಹಿರಂಗಕ್ಕೆ ಸಿದ್ದು ಆಗ್ರಹ
ಸರ್ಕಾರದ ವಿರುದ್ಧ ಸಮರ: 15 ದಿನ ಗಡುವು
‘ಮೂರು ನದಿಗಳ ಸುತ್ತಹಸಿರು ವಲಯ’
ರಸ್ತೆಯೋಜನೆಯಲ್ಲಿ ಮಾರ್ಪಾಡು:ಉದಾಸಿ
ಎಲ್ಲಾ ವರ್ಗಾವಣೆಗಳು ವಾಪಸ್
ಸಂಪುಟಕ್ಕೆ ಸೇರಲು ಶೆಟ್ಟರ್‌ಗೆ ಒತ್ತಡ
ಅಂಚೆ ಚೀಟಿಯಲ್ಲಿ ಕರ್ನಾಟಕ
ಪ್ರಜಾವಾಣಿ ಪ್ರವಾಹ ಪರಿಹಾರ ನಿಧಿಗೆ ಕಾಣಿಕೆ ನೀಡಿದವರು
ರಾಜಕೀಯದಿಂದ ಪಲಾಯನ ಇಲ್ಲ: ಶೋಭಾ
‘ಭಿನ್ನಮತದಿಂದ ಪಕ್ಷಕ್ಕೆ ಧಕ್ಕೆ’
ಕುರುಡಾಯಿತು ನ್ಯಾಯ
ಶೋಭಾ ನಿರ್ಗಮನ ಶೆಟ್ಟರ್‌ಗೆ ಆಹ್ವಾನ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618