ಬುಧವಾರ, ನವೆಂಬರ್ 11, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಬುದ್ಧಿಯಿಂದ ಕೆಲಸ ಮಾಡುವವರಷ್ಟೇ ಶಕ್ತಿಯಿಂದ ಕೆಲಸ ಮಾಡುವವರೂ ದೇಶದ ಬೆಳವಣಿಗೆಗೆ ಅತ್ಯವಶ್ಯಕ.
--ಎಮರ್ಸನ್
ಪುರವಣಿ
ವಾಣಿಜ್ಯ ಪುರವಣಿ
ತಂತ್ರಜ್ಞಾನ
ಯುವಜನ
ಮೆಟ್ರೊ ಮಂಗಳವಾರ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಕರ್ನಾಟಕ ದರ್ಶನ
ಸಾಪ್ತಾಹಿಕ ಪುರವಣಿ
ಆರೋಗ್ಯ
ಭೂಮಿಕಾ
ಸಿನಿಮಾ- ಕಿರುತೆರೆ ರಂಜನೆ
ವಿಮರ್ಶೆ
ಪುಸ್ತಕ ವಿಮರ್ಶೆ
ಚಿತ್ರ ವಿಮರ್ಶೆ
ಕೃಷಿ
ಮೆಟ್ರೊ ಗುರುವಾರ
ಮೆಟ್ರೊ ಶನಿವಾರ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಷ್ಟ್ರೀಯ
ಆಂಧ್ರ:ಅಕ್ರಮ ಗಣಿ ತನಿಖೆಗೆ ಸಮಿತಿ
ಪ್ರಜಾವಾಣಿ ವಾರ್ತೆ
ಕರ್ನಾಟಕದ ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ತನಿಖೆ ನಡೆಸಲು ಆಂಧ್ರಪ್ರದೇಶ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ತನಿಖಾ ಸಮಿತಿಗಳನ್ನು ನೇಮಿಸಿದೆ.


ಹೈದರಾಬಾದ್: ಕರ್ನಾಟಕದ ಪ್ರವಾಸೋದ್ಯಮ ಸಚಿವ ಜಿ.ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ (ಓಎಂಸಿ) ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಸಮಗ್ರ ತನಿಖೆ ನಡೆಸಲು ಆಂಧ್ರಪ್ರದೇಶ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ತನಿಖಾ ಸಮಿತಿಗಳನ್ನು ನೇಮಿಸಿದೆ.

ಅನಂತಪುರ ಜಿಲ್ಲೆಯಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆಯ ಕಾಯ್ದೆಗಳನ್ನು ಉಲ್ಲಂಘಿಸಿ ಈ ಕಂಪೆನಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದೆ. ಇದನ್ನು ಕೂಡಲೇ ತಡೆಯಬೇಕು ಎಂದು ಆಂಧ್ರ ಪ್ರದೇಶದ ವಿರೋಧ ಪಕ್ಷಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

ಮುಖ್ಯಮಂತ್ರಿ ಕೆ.ರೋಸಯ್ಯ ಮಂಗಳವಾರ ಅರಣ್ಯ ಮತ್ತು ಕೈಗಾರಿಕಾ ಸಚಿವಾಲಯದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. 10 ದಿನಗಳ ಒಳಗಾಗಿ ಈ ಸಮಿತಿಗಳು ತಮಗೆ ಪೂರ್ಣ ವರದಿ ಸಲ್ಲಿಸಬೇಕೆಂದೂ ಅವರು ಆದೇಶಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಎರಡೂ ಸಮಿತಿಗಳು ತಲಾ ಮೂವರು ಸದಸ್ಯರನ್ನು ಒಳಗೊಂಡಿರುತ್ತವೆ. ಈಗಾಗಲೇ ಅರಣ್ಯ ಸಚಿವಾಲಯದ ಅಧಿಕಾರಿಗಳು ಈ ಸಂಬಂಧ ತನಿಖೆಯನ್ನು ಆರಂಭಿಸಿದ್ದಾರೆ. ಕೈಗಾರಿಕಾ ಖಾತೆಯ ಅಧಿಕಾರಿಗಳೂ ಕೂಡಾ ತಕ್ಷಣದಲ್ಲೇ ತನಿಖೆ ಕೈಗೊಳ್ಳಲಿದ್ದಾರೆ. ಭದ್ರತೆಯ ಕಾರಣಗಳಿಗಾಗಿ ಈ ತನಿಖಾ ಸಮಿತಿಯ ಅಧಿಕಾರಿಗಳ ಹೆಸರನ್ನು ರಹಸ್ಯವಾಗಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ತೆಲುಗುದೇಶಂ ಪಕ್ಷವು ಕರ್ನಾಟಕ ಮತ್ತು ಆಂಧ್ರದಲ್ಲಿ ರಾಜಕಾರಣವನ್ನು ನಿಯಂತ್ರಿಸುತ್ತಿರುವ ‘ಗಣಿ ಮಾಫಿಯ’ಕ್ಕೆ ಕಡಿವಾಣ ಹಾಖಬೇಕು ಎಂದು ಆಗ್ರಹಪಡಿಸಿದೆ.

ಸಿಪಿಐ ಪ್ರಧಾನ ಕಾರ್ಯದರ್ಶಿ ಎ.ಬಿ.ಬರ್ಧನ್ ಮಾತನಾಡಿ, ವಿವಿಧ ರಾಜ್ಯ ಸರ್ಕಾರಿ ಸ್ವಾಮ್ಯದ ಗಣಿಗಳನ್ನು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಈ ಮಾಫಿಯ ತಿಂದು ಹಾಕುತ್ತಿದೆ. ಈ ಮಾಫಿಯಾಗೆ ಮತ್ತಷ್ಟು ಗಣಿ ಗುತ್ತಿಗೆ ದೊರೆತರೆ ಅವು ಆಥಿಕವಾಗಿ ಮತ್ತಷ್ಟು ಬಲಶಾಲಿಯಾಗುವದರಿಂದ ಅವನ್ನು ನಿಯಂತ್ರಿಸಲು ಸಾಧ್ಯವಿಲ್ಲದಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ಖಾಸಗಿಯವರಿಗೆ ಗಣಿ ಗುತ್ತಿಗೆ ನೀಡುವ ಉದ್ದೇಶದಿಂದ ಸಿದ್ಧಪಡಿಸಿರುವ ಗಣಿ ನಿಯಂತ್ರಣ ಮಸೂದೆಯನ್ನು ಸಿಪಿಐ ವಿರೋಧಿಸಲಿದೆ ಎಂದರು.

ಅಕ್ರಮ ಗಣಿಗಾರಿಕೆ ಸಾಧ್ಯತೆಗಳಿಲ್ಲ:  ಈ ನಡುವೆ, ಓಎಂಸಿಯು ಅಕ್ರಮ ಗಣಿಗಾರಿಕೆ ನಡೆಸುತ್ತಿಲ್ಲ ಎಂದು ಕೇಂದ್ರ ಉಕ್ಕು ಖಾತೆ ರಾಜ್ಯ ಸಚಿವ ಎ.ಸಾಯಿ ಪ್ರತಾಪ್ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿಗಳ ಭೇಟಿಯ ನಂತರ ವರದಿಗಾರರೊಂದಿಗೆ ಮಾತನಾಡಿ ಅವರು ಈ ವಿಷಯ ತಿಳಿಸಿದರು.

‘ಇದರ ಅರ್ಥ ನಾನು ಓಬಳಾಪುರಂ ಮೈನಿಂಗ್ ಕಂಪೆನಿಗೆ ಕ್ಲೀನ್ ಚಿಟ್ ನೀಡುತ್ತಿದ್ದೇನೆ ಎಂದು ಎಂದಲ್ಲ. ಓಎಂಸಿಯ ಗಣಿಗಾರಿಕೆಯ ಎಲ್ಲ ಕೆಲಸಗಳೂ ಒಪ್ಪಂದದ ಅನುಸಾರವೇ ನಡೆಯುತ್ತಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇತರ ಸುದ್ದಿಗಳು
ಪ್ರಬಲವಾಗುತ್ತಿರುವ ಚಂಡಮಾರುತ
7 ರಾಜ್ಯಗಳಲ್ಲಿ ಉಪಚುನಾವಣೆ: ಕಾಂಗ್ರೆಸ್ ‘ವಿಜಯ ಪರ್ವ’
ತಿಹಾರ್ ಜೈಲಿಗೆ ‘ಮರಳಿದ’ ಮನುಶರ್ಮ
ತಕ್ಷಣ ಎಂಎನ್‌ಎಸ್ ನಿಷೇಧಿಸಲು ಆಗ್ರಹ
ಸುಸೂತ್ರ ನಡೆದ ಪ್ರತಿಜ್ಞಾ ಸ್ವೀಕಾರ
‘ತಂದೂರಿ’ ಮಾಡುತ್ತೇವೆ
ಅಜ್ಮಿ ಬಂಧನಕ್ಕೆ ಆಗ್ರಹ:ಕಲಾಪ ಅಸ್ತವ್ಯಸ್ತ
ಆಂಧ್ರ:ಅಕ್ರಮ ಗಣಿ ತನಿಖೆಗೆ ಸಮಿತಿ
ತಮಿಳುನಾಡು: ಮಳೆಗೆ ಸತ್ತವರ ಸಂಖ್ಯೆ 68ಕ್ಕೆ
ಹೆಡ್ಲಿ ಮೊಬೈಲ್ ನಂಬರ್ ಪತ್ತೆ
482 ಗಣಿ ಪರವಾನಗಿ ಅಮಾನತು
ದೇಶ ಸುತ್ತಿ: ತಾಣ ನೋಡಿ
ಬಂಧನಕ್ಕೆ ಆಗ್ರಹ
ಹವಾಮಾನ ವೈಪರೀತ್ಯ:
ವಾಪಸು ಕರೆಸುವ ಹಕ್ಕೂ ಬೇಕು
ಜಾರಿದ ವಿಮಾನ
ತಪ್ಪಿದ ಅಪಘಾತ
ಭೋಪಾಲ್ ದುರಂತಕ್ಕೆ ಇಪ್ಪತ್ತೈದು ವರ್ಷ...
7 ರಾಜ್ಯಗಳಲ್ಲಿ ಉಪಚುನಾವಣೆ: ಇವರು ಹೀಗಂತಾರೆ...
ಕರ್ಕರೆ ಜಾಕೆಟ್ ನಾಪತ್ತೆ
ಪೊಲೀಸರಿಗೆ ನಕ್ಸಲ್ ಕಮಾಂಡರ್ ಬಲಿ
ನೀಲಗಿರಿ: ಭೂಕುಸಿತ27 ಸಾವು
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618