ಇಸ್ಲಾಮಾಬಾದ್ (ಪಿಟಿಐ): 26/11ರ ಮುಂಬೈ ದಾಳಿಗೆ ಸಂಬಂಧಿಸಿದಂತೆ ಭಾರತದಲ್ಲಿ ಬಂಧಿನಾಗಿರುವ ಅಜ್ಮಲ್ ಅಮಿರ್ ಕಸಬ್ನನ್ನು ಪಾಕಿಸ್ತಾನಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸುವಂತೆ ಇಲ್ಲಿನ ವಕೀಲರು ಒತ್ತಾಯಿಸಿದ್ದಾರೆ.
ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಈಗಾಗಲೇ ಲಷ್ಕರ್-ಎ ತೊಯ್ಬಾ ಸಂಘಟನೆಯ ಏಳು ಮಂದಿಯನ್ನು ಬಂಧಿಸಲಾಗಿತ್ತು, ಅವರ ಜೊತೆಯಲ್ಲೇ ಕಸಬ್ನನ್ನು ವಿಚಾರಣೆಗೆ ಒಳಪಡಿಸಬೇಕೆಂದು ವಕೀಲರು ಒತ್ತಾಯಿಸಿದ್ದಾರೆ.