ನವಿ ಮುಂಬೈ (ಪಿಟಿಐ): 13ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಭರಾಟೆಯ ಪ್ರಚಾರ ನಡೆಸಿರುವ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ತಾನು ಬದ್ಧ ಎಂದು ಹೇಳಿದರು.
ಶುಕ್ರವಾರ ರಾತ್ರಿ ಇಲ್ಲಿ ನಡೆದ ಪ್ರಚಾರ ಭಾಷಣದಲ್ಲಿ ಶಿವಸೇನೆ- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಬೆಂಬಲ ಕೋರುತ್ತಾ ಮಾಜಿ ಉಪ ಪ್ರಧಾನಿ ಹೀಗೆ ಹೇಳಿದಾಗ ನೆರೆದಿದ್ದ ಜನ ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.