ಶಿಮ್ಲಾ (ಪಿಟಿಐ): ಟಿಕೆಟ್ ಪಡೆಯಲು ಮತ್ತು ಪಕ್ಷದ ಉನ್ನತ ಹುದ್ದೆಗೆ ಏರಲು ಕೆಲವು ಬಾರಿ ಪ್ರಭಾವಿ ವ್ಯಕ್ತಿಗಳ ಸಹಾಯ ಪಡೆದ ಪ್ರಕರಣಗಳಿರುವುದು ನಿಜ ಎಂದು ರಾಹುಲ್ ಒಪ್ಪಿಕೊಂಡಿದ್ದಾರೆ.
ಯುವಕರನ್ನು ಕಾಂಗ್ರೆಸ್ಗೆ ಸೆಳೆಯಲು ಇಲ್ಲಿಗೆ ಒಂದು ದಿನದ ಭೇಟಿಗೆ ಆಗಮಿಸಿರುವ ರಾಹುಲ್, ಪಕ್ಷದಲ್ಲಿ ವಶಿಲಿಬಾಜಿ ವ್ಯವಸ್ಥೆಯನ್ನು ಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ತಿಳಿಸಿದ್ದಾರೆ.
ಈ ಬದಲಾವಣೆಯನ್ನು ತತ್ಕ್ಷಣದಿಂದ ಜಾರಿ ಮಾಡಲು ಸಾಧ್ಯವಿಲ್ಲ. ಕ್ರಮೇಣವಾಗಿ ಬದಲಾವಣೆ ತರಲಾಗುವುದು ಎಂದು ಹೇಳಿದರು.
ಪಂಜಾಬ್ ಮತ್ತು ತಮಿಳುನಾಡಿನಲ್ಲಿ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆ ಮುಗಿಯುತ್ತ ಬಂದಿದೆ. ಉಳಿದ ರಾಜ್ಯಗಳಲ್ಲೂ ಆದಷ್ಟು ಬೇಗ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಂಜಾಬ್ನಲ್ಲಿ ಯುವ ಕಾಂಗ್ರೆಸ್ ಮತ್ತು ಎನ್ಎಸ್ಯುಐನ ಜಿಲ್ಲಾ ಅಧ್ಯಕ್ಷರ ಪೈಕಿ ಶೇಕಡಾ 50ರಷ್ಟು ಪ್ರಜಾಸತಾತ್ಮಕವಾಗಿಯೇ ಆಯ್ಕೆಯಾಗಿದ್ದಾರೆ. ಬ್ಲಾಕ್ ಮತ್ತು ಪಂಚಾಯತ್ ಮಟ್ಟದಲ್ಲಿ ನೂರಕ್ಕೆ ನೂರರಷ್ಟು ಪ್ರಜಾಸತಾತ್ಮಕವಾಗಿ ಆಯ್ಕೆಯಾಗಿದ್ದಾರೆ ಎಂದು ರಾಹುಲ್ ತಿಳಿಸಿದ್ದಾರೆ.
ಚುನಾವಣೆಯ ಮೂಲಕ ಪದಾಧಿಕಾರಿಗಳ ಆಯ್ಕೆ ಮಾಡುವ ವಿಧಾನವನ್ನು ಮುಂದಿನ ವರ್ಷ ದೇಶದಾದ್ಯಂತ ಅನುಸರಿಸಲಾಗುವುದು ಎಂದು ಹೇಳಿದ್ದಾರೆ.
35 ವರ್ಷದೊಳಗಿನ ಅಪರಾಧ ಹಿನ್ನೆಲೆ ಇರದ ಯುವಕರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಹಾಗೂ ಚುನಾಯಿತ ಪದಾಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ರಾಹುಲ್ ಹೆಳಿದ್ದಾರೆ.