ಬೆಂಗಳೂರು: ಪಕ್ಷದ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.
ಸಭೆ ನಂತರ ಸಂಜೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಿತು. ಸರ್ಕಾರ ಸರಿಯಾಗಿ ಪರಿಹಾರ ಕಾರ್ಯಗಳನ್ನು ಹಮ್ಮಿಕೊಂಡಿಲ್ಲ ಎಂದು ಅನೇಕ ಶಾಸಕರು ದೂರಿದರು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಂತರ ತಿಳಿಸಿದರು.
ದೇಶಪಾಂಡೆ ಮತ್ತು ಸಿದ್ದರಾಮಯ್ಯ ಪ್ರತ್ಯೇಕವಾಗಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ಜನಪ್ರತಿನಿಧಿಗಳು ಕೂಡ ನೆರೆ ಪರಿಹಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಜನರಿಗೆ ಪರಿಹಾರ ತಲುಪುವವರೆಗೂ ಕ್ಷೇತ್ರ ಬಿಡಬಾರದೆನ್ನುವ ಸೂಚನೆ ನೀಡಿದರು. ನೆರೆಯಿಂದಾಗಿ 15 ಜಿಲ್ಲೆಗಳಲ್ಲಿ ಭಾರಿ ಸಮಸ್ಯೆ ಆಗಿದೆ. ಆಯಾ ಕ್ಷೇತ್ರಗಳಲ್ಲಿ ಶಾಸಕರು, ಮಾಜಿ ಶಾಸಕರು ಹಾಜರಿರಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅಧಿಕಾರಿಗಳ ಮೇಲೆ ಒತ್ತಡ
ಬೆಂಗಳೂರು: ಬಿಜೆಪಿ ಮತ್ತು ಆರ್ಎಸ್ಎಸ್ ಸ್ಥಾಪಿಸಿರುವ ನೆರೆ ಪರಿಹಾರ ನಿಧಿಗೆ ಹಣ ಕೊಡಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಆರೋಪ ಮಾಡಿದರು.