ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಇದೇನೂ ವಿಶೇಷ ಅಧಿವೇಶನ ಅಲ್ಲ, ಮುಂದುವರಿದ ಅಧಿವೇಶನ ಅಷ್ಟೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಬರ ಪರಿಸ್ಥಿತಿ ಕುರಿತು ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ಮಾತನಾಡಿದ ಅವರು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗಿಂತ ಮೊದಲು ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಮತ್ತು ಕೆಲವೆಡೆ ಸಂಭವಿಸಿರುವ ನೆರೆಹಾನಿಗಳ ಬಗ್ಗೆ ಚರ್ಚಿಸಬೇಕು ಎಂದು ಆಗ್ರಹಿಸಿದರು.