ನವದೆಹಲಿ (ಪಿಟಿಐ): ಮಹಾರಾಷ್ಟ್ರ, ಹರಿಯಾಣ ಹಾಗೂ ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಪ್ರಕ್ರಿಯೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದೆ.
ಅಕ್ಟೋಬರ್ 13 ರಂದು ನಡೆಯಲಿರುವ ಈ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯು, ಲೋಕಸಭೆ ಚುನಾವಣೆಯ ಬಳಿಕ ಪ್ರಮುಖ ರಾಜಕೀಯ ಪಕ್ಷಗಳ ಜನಪ್ರಿಯತೆಗೆ ಮೊದಲ ಮಹತ್ವದ ಪರೀಕ್ಷೆಯಾಗಲಿದೆ. ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನ. 26 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು 29 ಕೊನೆಯ ದಿನ.