|
ಬೆಂಗಳೂರು: ಬೈಕ್ನಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹ್ಯೂಲೆಟ್ ಪ್ಯಾಕರ್ಡ್ (ಎಚ್ಪಿ) ಕಂಪೆನಿಯ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವರಬಿಸನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಮ್ಮಾರ್ ಸುಮನ್ (28) ಮೃತಪಟ್ಟವರು. ಘಟನೆಯಲ್ಲಿ ಹಿಂಬದಿ ಸವಾರ ಅಶೋಕ್ ಚಲ್ಲಾ (29) ಗಾಯಗೊಂಡಿದ್ದಾರೆ. ಇಬ್ಬರೂ ಎಚ್ಪಿ ಕಂಪೆನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ರಾತ್ರಿ 9 ಗಂಟೆಗೆ ಕೆಲಸ ಮುಗಿಸಿದ ಅವರು ಮಾರತ್ಹಳ್ಳಿಯಲ್ಲಿರುವ ಮನೆಗೆ ಹೋಗುತ್ತಿದ್ದರು. ದೇವರಬಿಸನಹಳ್ಳಿಯ ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಅವರು ಹಿಂದಿನಿಂದ ಡಿಕ್ಕಿ ಹೊಡೆದರು. ತೀವ್ರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸುಮನ್ ಸಾವನ್ನಪ್ಪಿದ್ದು ಅಶೋಕ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರೂ ಆಂಧ್ರಪ್ರದೇಶದ ತೆನಾಲಿ ಮೂಲದವರಾಗಿದ್ದು ಕೆಲ ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ಲಾರಿ ಚಾಲಕ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಏರ್ಪೋರ್ಟ್ ಸಂಚಾರ ಪೊಲೀಸರು ತಿಳಿಸಿದ್ದಾರೆ.
|