ADVERTISEMENT

ನನ್ನ ಜೀವಕ್ಕೂ ಅಪಾಯವಿದೆ: ನೇಹಾ ತಂದೆ ಆತಂಕ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2024, 6:42 IST
Last Updated 25 ಏಪ್ರಿಲ್ 2024, 6:42 IST
<div class="paragraphs"><p>ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ</p></div>

ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ

   

ಹುಬ್ಬಳ್ಳಿ: 'ನನ್ನ ಜೀವಕ್ಕೂ ಅಪಾಯವಿರುವ ಮುನ್ಸೂಚನೆ ಸಿಗುತ್ತಿದ್ದು, ನನ್ನ ಕುಟುಂಬಕ್ಕೆ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು' ಎಂದು ಹತ್ಯೆಯಾದ ನೇಹಾ ಹಿರೇಮಠ ಅವರ ತಂದೆ ನಿರಂಜನಯ್ಯ ಹಿರೇಮಠ ಹೇಳಿದರು.

ನಗರದ ಬಿಡನಾಳದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ನೇಹಾ ಹತ್ಯೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಆಗಿರುವುದರಿಂದ ಹಲವರು ಸಾಂತ್ವನ ಹೇಳಲು ಮನೆಗೆ ಬರುತ್ತಿದ್ದಾರೆ. ಈ ವೇಳೆ ಸಂಶಯಾಸ್ಪದ ವ್ಯಕ್ತಿಗಳೂ ಕಂಡು ಬರುತ್ತಿದ್ದಾರೆ' ಎಂದರು.

ADVERTISEMENT

'ಸಾಂತ್ವನ ಹೇಳುವ ನೆಪದಲ್ಲಿ ಬಂದು, ಮನೆಯ ಸುತ್ತ ತಿರುಗಾಡಿರುವ ಶಂಕಾಸ್ಪದ ವ್ಯಕ್ತಿಗಳಿಂದ ನನ್ನ ಜೀವಕ್ಕೆ ಅಪಾಯವಿರುವ ಮನ್ಸೂಚನೆ ಇದೆ. ಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ಸೂಕ್ತ ಭದ್ರತೆ ಒದಗಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗುವುದು' ಎಂದರು.

'ನೇಹಾ ಹತ್ಯೆ ಮಾಡುವ ಮುನ್ನ ಫಯಾಜ್ ತನ್ನ ಸ್ನೇಹಿತರೊಂದಿಗೆ ನಮ್ಮ ಮನೆ ಸುತ್ತ ಸುತ್ತಾಡಿದ್ದ. ನೇಹಾಗೆ ಕರೆ ಮಾಡಿ, ಜೀವ ಬೆದರಿಕೆಯನ್ನೂ ಹಾಕಿದ್ದ. ಈ ಹಿಂದೆ ಅಪಹರಿಸಿಲು ಸಹ ಯತ್ನಿಸಿದ್ದ. ಇದೊಂದು ವ್ಯವಸ್ಥಿತ ಕೃತ್ಯವಾಗಿದೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.