ಮೈಸೂರು: ಸಕಲೆಂಟು ಜಾತಿ ಸಹಬಾಳ್ವೆ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಮೈಸೂರಿನ ಶಾಂತಿ ನಗರ( ಮಹದೇವಪುರ ರಿಂಗ್ ರಸ್ತೆ) ದಲ್ಲಿರುವ ಮುಸ್ಲಿಂ ಅಂಗಡಿಯಲ್ಲಿ ಶಾಂತಿ ಸೌಹಾರ್ದತೆ, ಸಹಬಾಳ್ವೆಯ ಸಂದೇಶ ಸಾರುವ ಕಾರಣಕ್ಕಾಗಿ ಮಾಂಸ ಖರೀದಿಸುವ ಕಾರ್ಯಕ್ರಮ ಭಾನುವಾರ ನಡೆಯಿತು.
ಸಾಹಿತಿ ದೇವನೂರು ಮಹದೇವ, ಹೋರಾಟಗಾರರಾದ ಪ.ಮಲ್ಲೇಶ್, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರಗೋಡು, ಆಲಗೂಡು ಶಿವಕುಮಾರ್, ಶಂಭುಲಿಂಗಸ್ವಾಮಿ, ಪಿ.ಮರಂಕಯ್ಯ, ಬಸವರಾಜು, ಕಲ್ಲಹಳ್ಳಿ ಕುಮಾರ ಅವರು ಅಜೀಜ್ ಸೇಠ್ ಮುಖ್ಯ ರಸ್ತೆಯಲ್ಲಿನ ಸೈಯ್ಯದ್ ರಿಜ್ವಾನ್ ಅವರ ಕರ್ನಾಟಕ ಮಟನ್ ಅಂಡ್ ಚಿಕನ್ ಸ್ಟಾಲ್ನಲ್ಲಿ ಮಾಂಸ ಖರೀದಿಸಿದರು.
ಕೋಮುವಾದ ಅಳಿಯಲಿ ಕರ್ನಾಟಕ ಉಳಿಯಲಿ ಎಂಬ ಘೋಷಣೆಗಳನ್ನು ಕೂಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.