ADVERTISEMENT

UPSC ಸಂದರ್ಶನ | ಯೂಟ್ಯೂಬ್‌ನಲ್ಲಿರುವಂತೆ ಇರುವುದಿಲ್ಲ: ಶಾಂತಪ್ಪ ಕುರುಬರ

ಪ್ರಜಾವಾಣಿ ವಿಶೇಷ
Published 23 ಏಪ್ರಿಲ್ 2024, 10:17 IST
Last Updated 23 ಏಪ್ರಿಲ್ 2024, 10:17 IST

ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ 2023ನೇ ಸಾಲಿನಲ್ಲಿ 644ನೇ ರ‍್ಯಾಂಕ್‌ ಪಡೆದಿರುವ ಬಳ್ಳಾರಿಯ ಶಾಂತಪ್ಪ ಕುರುಬರ (ಜಡೆಮ್ಮನವರ) ಉತ್ತಮ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶದ, ಸರ್ಕಾರಿ ಶಾಲೆಗಳಲ್ಲಿ ಓದಿದ ಶಾಂತಪ್ಪ ಬಡತನದಲ್ಲಿಯೇ ಬೆಳೆದು ಬಂದವರು. ಬೆಂಗಳೂರಿನಲ್ಲಿ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ಅವರು, ಹಲವು ಸಮಾಜಮುಖಿ ಕೆಲಸ ಕಾರ್ಯಗಳಿಂದಲೂ ಪರಿಚಿತರಾಗಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದರೂ, ಛಲ ಬಿಡದೆ ಓದಿ, ತಾಳ್ಮೆಯಿಂದ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ ಶಾಂತಪ್ಪ. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿನ ಅವರ ಅನುಭವ ಮತ್ತು ಈಗ ಪರೀಕ್ಷಾ ಸಿದ್ಧತೆಯಲ್ಲಿರುವವರಿಗೆ ಅಮೂಲ್ಯ ಸಲಹೆಗಳನ್ನು ಈ ವಿಡಿಯೊದಲ್ಲಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.