ADVERTISEMENT

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಏಪ್ರಿಲ್ 2024, 5:21 IST
Last Updated 24 ಏಪ್ರಿಲ್ 2024, 5:21 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ತಿರುವನಂತಪುರ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ತಿರುವನಂತಪುರದಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ‘ಕೇರಳದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಜನಬೆಂಬಲಿದೆ. ಹಾಗಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಕಾಂಗ್ರೆಸ್‌ ಸೇರಿದಂತೆ ಇತರೆ ವಿರೋಧ ಪಕ್ಷಗಳ ನಾಯಕರನ್ನು ಭ್ರಷ್ಟರು ಎಂದು ಸದಾ ಟೀಕಿಸುವ ಪ್ರಧಾನಿ ಮೋದಿಯವರಿಗೆ ಗೆಲ್ಲುವು ವಿಶ್ವಾಸವಿದ್ದರೆ ಭ್ರಷ್ಟರನ್ನೇ ನಿಮ್ಮ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆ ಮಾಡಿಕೊಳ್ಳುವುದೇಕೆ’ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

‘ವಿದೇಶದಲ್ಲಿ ಕಾಂಗ್ರೆಸ್ ಇಟ್ಟಿರುವ ಕಪ್ಪುಹಣವನ್ನು ವಾಪಸ್ ತರುತ್ತೇವೆ ಎಂದು ಮೋದಿ ಅವರು ಹೇಳಿದ್ದರು. ಹಾಗಾದರೆ ಆ ಹಣ ಎಲ್ಲಿದೆ? ಪ್ರತಿ ಕುಟುಂಬಕ್ಕೆ ₹15 ಲಕ್ಷ ನೀಡುವುದಾಗಿ ಹೇಳಿದ್ದರು. ಜತೆಗೆ, ರೈತರ ಆದಾಯ ದುಪ್ಪಟ್ಟು ಮಾಡುತ್ತೇನೆ ಎಂದಿದ್ದರು. ಇದು ಆಗಿದೆಯೇ... ಇದುವೇ ಮೋದಿಯವರ ಗ್ಯಾರಂಟಿ’ ಎಂದು ಖರ್ಗೆ ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.