ADVERTISEMENT

ಕೆಎಂಎಫ್‌ಗೆ ಶಿವರಾಜಕುಮಾರ್ ರಾಯಭಾರಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2023, 23:36 IST
Last Updated 1 ಆಗಸ್ಟ್ 2023, 23:36 IST
   

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳದ (ಕೆಎಂಎಫ್) ನಂದಿನಿ ಉತ್ಪನ್ನಗಳಿಗೆ ಚಲನಚಿತ್ರ ನಟ ಶಿವರಾಜ್‍ಕುಮಾರ್ ಅವರು ನೂತನ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ಈ ಹಿಂದೆ ರಾಜ್‍ಕುಮಾರ್ ಅವರು ಯಾವುದೇ ಸಂಭಾವನೆ ಪಡೆಯದೆ ನಂದಿನಿ ಬ್ರ್ಯಾಂಡ್‍ಗಳ ರಾಯಭಾರಿಯಾಗಿದ್ದರು. ಪುನೀತ್ ರಾಜ್‍ಕುಮಾರ್ ಸಹ ಹಲವು ವರ್ಷಗಳ ಕಾಲ ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿದ್ದರು. ಅಪ್ಪ ಮತ್ತು ತಮ್ಮನಂತೆ ಶಿವರಾಜ್ ಕುಮಾರ್ ಕೂಡ ಯಾವುದೇ ಸಂಭಾವನೆ ಪಡೆಯದೇ ರಾಯಭಾರತ್ವ ವಹಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT