‘ಪ್ರಧಾನಿ ನರೇಂದ್ರ ಮೋದಿಯವರು 20 ರಿಂದ 25 ಕೋಟ್ಯಾಧೀಶರನ್ನು ಹುಟ್ಟು ಹಾಕಿದರು. ಆದರೆ, ನಮ್ಮ ಸರ್ಕಾರವು ಆರ್ಥಿಕ ಸಂಪತ್ತನ್ನು ಸೂಕ್ತ ರೀತಿಯಲ್ಲಿ ಹಂಚಿಕೆ ಮಾಡಿ, ಎಲ್ಲರನ್ನೂ ಆರ್ಥಿಕವಾಗಿ ಸ್ಥಿತಿವಂತರನ್ನು ಮಾಡಲು ಆದ್ಯತೆ ಕೊಡಲಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದರು. ವಿಜಯಪುರದಲ್ಲಿ ಶುಕ್ರವಾರ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ‘ದೇಶದ ಪ್ರತಿಯೊಬ್ಬ ವ್ಯಕ್ತಿ ಮತ್ತು ಕುಟುಂಬವು ನೆಮ್ಮದಿಯಿಂದ ಬಾಳುವಂತಹ ವಾತಾವರಣವನ್ನು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟ ತರಲಿದೆ. ಜನರ ಸಮಸ್ಯೆ, ಸಂಕಷ್ಟ ನಿವಾರಣೆಯೇ ನಮ್ಮ ಆದ್ಯತೆ ಆಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.