ಬೆಂಗಳೂರು: ‘ಬೆಂಗಳೂರು– ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸುವ ಸಂಬಂಧ ಮುಂದಿನ ಒಂದು ವಾರದಲ್ಲಿ ಸಮಜಾಯಿಷಿ ನೀಡದಿದ್ದರೆ ಇಲಾಖೆಯ ಮುಖ್ಯಸ್ಥರಿಗೆ ಖುದ್ದು ಹಾಜರಿಗೆ ನಿರ್ದೇಶನ ನೀಡಬೇಕಾಗುತ್ತದೆ’ ಎಂದು ಹೈಕೋರ್ಟ್ ರೈಲ್ವೆ ಇಲಾಖೆಗೆ ಮೌಖಿಕ ಎಚ್ಚರಿಕೆ ನೀಡಿದೆ.
ಈ ಸಂಬಂಧ ರೈಲ್ವೆ ಯಾತ್ರಿಗಳ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಪೀಠವು ಸೋಮವಾರ ವಿಚಾರಣೆ ನಡೆಸಿತು.