ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ: ಕಲ್ಲು ತೂರಾಟ; ನಿಷೇಧಾಜ್ಞೆ ಜಾರಿ

Published : 19 ಫೆಬ್ರುವರಿ 2015, 13:25 IST
ಫಾಲೋ ಮಾಡಿ
Comments

ಶಿವಮೊಗ್ಗ: ನಗರದಲ್ಲಿ ಪೀಪಲ್ ಪ್ರಂಟ್ ಆಫ್ ಇಂಡಿಯಾ ಸಮಾವೇಶ ಅಂಗವಾಗಿ ಗುರುವಾರ ಆಯೋಜಿಸಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ಮಾಡಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಪಿಪಿಐ ಇಲ್ಲಿನ ‘ಸೈನ್ಸ್ ಮೈದಾನ’ದಲ್ಲಿ ಸಮಾವೇಶ ಆಯೋಜಿಸಿತ್ತು. ಸಮಾವೇಶದ ಅಂಗವಾಗಿ ನಡೆದ ಮೆರವಣಿಗೆ ಸಾಗುತ್ತಿದ್ದಾಗ ಶಿವಪ್ಪ ವೃತ್ತದಲ್ಲಿ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಎರಡು ಸುತ್ತು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ನಂತರ ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆ ಕಾರ್ಯಕ್ರಮ ಜರುಗಿತು.

ನಗರದಲ್ಲಿ ಬಿಗುವಿನ ವಾತಾವರಣ ಇದ್ದುದರಿಂದ ಕೆಲ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT