ಕುರುಗೋಡು : ‘ರಾಜ್ಯ ಸೇರಿ ನಮ್ಮ ದೇಶದ ಯಾವ ಮೂಲೆಯಲ್ಲಾದರೂ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದರೆ, ಅವರನ್ನು ಕೂಡಲೇ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಬೇಕು ಎಂಬುದು ನನ್ನ ಬಯಕೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ತಿಳಿಸಿದರು.
ಪಟ್ಟಣದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಪರ ಮತಯಾಚನೆಗೆ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಇಲ್ಲಿಯೇ ಇಲ್ಲಿ ಹುಟ್ಟಿ ಬೆಳೆದು, ಇಲ್ಲಿನ ಗಾಳಿ, ಆಹಾರ ಸೇವಿಸಿ ಹೆತ್ತ ತಾಯಿಯ ವಿರುದ್ಧ ಘೋಷಣೆ ಕೂಗುವವರಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ’ ಎಂದು ಅವರು ಹೇಳಿದರು.