ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗೆ ಕುಸಿದ ಮೆಟ್ರೊ ಕಾಮಗಾರಿಯ ತಡೆಗೋಡೆ: ರಸ್ತೆ ಬಂದ್‌

Published 8 ಮೇ 2024, 16:26 IST
Last Updated 8 ಮೇ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ಕಾಳೇನ ಅಗ್ರಹಾರ–ನಾಗವಾರವನ್ನು ಸಂಪರ್ಕಿಸುವ ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗದಲ್ಲಿ ಪಾಟರಿ ಟೌನ್‌ ಮೆಟ್ರೊ ನಿಲ್ದಾಣ ಕಾಮಗಾರಿಗಾಗಿ ನಿರ್ಮಿಸಿದ್ದ ತಾತ್ಕಾಲಿಕ ತಡೆಗೋಡೆ ಬುಧವಾರ ಮಳೆಗೆ ಕುಸಿದು ಬಿದ್ದಿದೆ. ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಮೆಟ್ರೊ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣು ಅಗೆಯಲು ತಾತ್ಕಾಲಿಕ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಬುಧವಾರ ಸಂಜೆ 5.45ರ ಹೊತ್ತಿಗೆ ಸುರಿದ ಮಳೆಗೆ ತಡೆ ಕುಸಿದಿದೆ. ಇದರಿಂದ ಬೋರ್‌ ಬ್ಯಾಂಕ್‌ ರಸ್ತೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಹಾಗಾಗಿ ಈ ರಸ್ತೆಯನ್ನು ಮುಚ್ಚಲಾಗಿದೆ. ರಸ್ತೆ ದುರಸ್ತಿಯಾಗುವವರೆಗೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT