‘ಸೋನು ಶ್ರೀನಿವಾಸ್ ಗೌಡ ಅವರನ್ನು ವಾಸವಿದ್ದ ಮನೆಗೆ ಹಾಗೂ ಬಾಲಕಿಯ ರಾಯಚೂರಿನ ಮನೆಗೆ ಕರೆದೊಯ್ದು ಮಹಜರು ನಡೆಸಲಾಗಿದೆ. ಜೊತೆಗೆ, ಮಗು ದತ್ತು ಸಂಬಂಧ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ಕಸ್ಟಡಿಗೆ ಅವಧಿ ಮುಗಿದಿದ್ದರಿಂದ, ಅವರನ್ನು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಲಾಯಿತು’ ಎಂದು ಪೊಲೀಸ್ ಮೂಲಗಳು ಹೇಳಿವೆ.