‘ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗೆ ನೀಡಬೇಕಾದ ವೇತನವನ್ನು ನಿಯಮಾನುಸಾರ ಪಾವತಿಸಲಾಗಿದೆ. ಯೋಜನೆಯನ್ನು ಜಿವಿಕೆ ಇಎಂಆರ್ ಸಂಸ್ಥೆ ನಿರ್ವಹಿಸುತ್ತಿದ್ದು, ಅವರು ಸಿಬ್ಬಂದಿಗೆ ವೇತನವನ್ನು ಪಾವತಿ ಮಾಡಬೇಕು. ಅಧಿಕಾರಿಗಳು ಮತ್ತು ಜಿವಿಕೆ ಇಎಂಆರ್ ಏಜೆನ್ಸಿಯೊಂದಿಗೆ ಮಂಗಳವಾರ ಚರ್ಚೆ ನಡೆಸಲಾಯಿತು. ಸರ್ಕಾರದಿಂದ ಯಾವುದೇ ಹಣ ಬಾಕಿ ಇಲ್ಲ. ಏಜೆನ್ಸಿಯಿಂದ ವ್ಯತ್ಯಾಸವಾಗಿದ್ದರೆ ಸರಿಪಡಿಸಬೇಕು. ಉಳಿದ ಬೇಡಿಕೆಗಳನ್ನು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಚರ್ಚಿಸಿ ಬಗೆಹರಿಸಲಾಗುವುದು ಎಂದು 108 ಆಂಬುಲೆನ್ಸ್ ಸಿಬ್ಬಂದಿಗೆ ಮನವರಿಕೆ ಮಾಡಿದ್ದರಿಂದ ಅವರು ಮುಷ್ಕರ ವಾಪಸ್ ಪಡೆದಿದ್ದಾರೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.