ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2023’ ಉದ್ಘಾಟಿಸುವರು. ಕಝಕಿಸ್ತಾನದ ಡಿಜಿಟಲ್ ಅಭಿವೃದ್ಧಿ, ನಾವೀನ್ಯತೆ ಮತ್ತು ವೈಮಾನಿಕ ಉದ್ಯಮ ಖಾತೆ ಸಚಿವ ಬಾಗ್ದೋತ್ ಮುಸ್ಸಿನ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಎಎಂಡಿ ಸಮೂಹದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮಾರ್ಕ್ ಪೇಪರ್ಮಾಸ್ಟರ್, ವಿಪ್ರೊ ಕಾರ್ಯನಿರ್ವಾಹಕ ನಿರ್ದೇಶಕ ರಿಷಾದ್ ಪ್ರೇಮ್ಜಿ ಸೇರಿದಂತೆ ಹಲವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.