ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ ಸಂದೇಶ ಮುದ್ರಿತ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

Published 26 ಏಪ್ರಿಲ್ 2024, 4:16 IST
Last Updated 26 ಏಪ್ರಿಲ್ 2024, 4:16 IST
ಅಕ್ಷರ ಗಾತ್ರ

ಚಾಮರಾಜನಗರ: ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಶ್ರಮಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿ, ಕೈಮಗ್ಗದ ರೇಷ್ಮೆ ಸೀರೆಗಳಲ್ಲೂ ಜಾಗೃತಿ ಸಂದೇಶವನ್ನು ಮುದ್ರಿಸಿದೆ.

ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ಗ, ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಲಕ್ಷ್ಮಿ ಹಾಗೂ ಚಾಮರಾಜನಗರ ಸಹಾಯಕ ಚುನಾವಣಾಧಿಕಾರಿ ಸವಿತಾ ಸೇರಿದಂತೆ ಉನ್ನತ ಅಧಿಕಾರಿಗಳು ಮತದಾನದ ದಿನ ಆ ಸೀರೆಗಳನ್ನು ಧರಿಸಿ ಮಿಂಚಿದರು.

‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ಸಂದೇಶನ್ನು ಸೀರೆಯಲ್ಲಿ ಮುದ್ರಿಸಲಾಗಿದೆ.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ನಗರದ ಪಿಡಬ್ಲ್ಯುಡಿ ಕಾಲೊನಿ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ರೇಷ್ಮೆ ಸೀರೆ ಧರಿಸಿ ಮತಗಟ್ಟೆಗೆ ಬಂದಿದ್ದ ಅವರಿಗೆ ಲಕ್ಷ್ಮಿ, ಸವಿತಾ ಸಾಥ್ ನೀಡಿದರು.

‘ಕೊಳ್ಳೇಗಾಲದ ನೇಕಾರ ಕೃಷ್ಣಮೂರ್ತಿ ಅವರು 10 ಸೀರೆಗಳನ್ನು ನೇಯ್ದಿದ್ದು, ಅದನ್ನು ನಾವು ಖರೀದಿಸಿದ್ದೇವೆ. ಮತದಾನದ ಅರಿವು ಮೂಡಿಸಲು ಸ್ವೀಪ್ ಸಮಿತಿ ಮಾಡಿರುವ ಪ್ರಯತ್ನ ಇದು’ ಎಂದು ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ಗಮನ ಸೆಳೆಯುತ್ತಿದೆ ಸಾಂಪ್ರದಾಯಿಕ ಮತಗಟ್ಟೆ: ಚಾಮರಾಜನಗರದ ರಾಮಸಮುದ್ರದ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಸಾಂಪ್ರದಾಯಿಕ ಮತಗಟ್ಟೆ ಗಮನಸೆಳೆಯುತ್ತಿದೆ.

ಜಾನಪದ ಕಲಾವಿದರು ಬಳಸುವ ಸಂಗೀತ ಪರಿಕರಗಳು, ಹಳೆ ಕಾಲದಲ್ಲಿ ಬಳಸುತ್ತಿದ್ದ ವಸ್ತುಗಳನ್ನು ಮತಗಟ್ಟೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಜನರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಮುಸ್ಲಿಮರಿಂದ ಬೆಳಿಗ್ಗೆಯೇ ಮತದಾನ: ಬಿಸಿಲು ಮತ್ತು ಮಧ್ಯಾಹ್ನ ಶುಕ್ರವಾರದ ಪ್ರಾರ್ಥನೆ ಇರುವುದರಿಂದ ಮುಸ್ಲಿಂ ಸಮುದಾಯದ ಮತದಾರರು ಬೆಳಿಗ್ಗೆಯೇ ಮತದಾನ ಮಾಡಲು ಉತ್ಸಾಹ ತೋರುತ್ತಿದ್ದಾರೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT