ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ನೀರಿನ ಸಮಸ್ಯೆ ಇರುವುದು ಶೇಕಡಾ ನೂರರಷ್ಟು ಸತ್ಯ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ಸಮಸ್ಯೆ ಸೃಷ್ಟಿಯಾಗಿದೆ. ತಮಿಳುನಾಡಿನ ಸಾವಿರಾರು ಜನರು ಕರ್ನಾಟಕದಲ್ಲಿ, ಇಲ್ಲಿನ ಸಾವಿರಾರು ಜನರು ತಮಿಳುನಾಡಿನಲ್ಲಿ ಉದ್ಯೋಗದಲ್ಲಿದ್ದಾರೆ. ಎರಡೂ ರಾಜ್ಯಗಳಿಗೆ ಸಮಾನ ನ್ಯಾಯ ದೊರೆಯಬೇಕು. ಈ ನಿಟ್ಟಿನಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಸರ್ಕಾರ ನಿರ್ಣಯ ಕೈಗೊಳ್ಳುತ್ತವೆ’ ಎಂದರು.