ಕಿರುತೆರೆ, ತುಳು ಮತ್ತು ಕನ್ನಡ ರಂಗಭೂಮಿ, ಚಲನಚಿತ್ರದಲ್ಲಿ ನವೀನ್ ಮಾಡಿರುವ ಸಾಧನೆಯನ್ನು ಪರಿಗಣಿಸಿ ಸಾಹಿತಿ ನಾ. ದಾಮೋದರ ಶೆಟ್ಟಿ ನೇತೃತ್ವದ ಆಯ್ಕೆ ಸಮಿತಿಯು ನವೀನ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ರಂಗಕರ್ಮಿ ದಿವಂಗತ ಭಾಸ್ಕರ ನೆಲ್ಲಿತೀರ್ಥ ಸ್ಮರಣೆಯಲ್ಲಿ ನೀಡುವ ಪ್ರಶಸ್ತಿಯನ್ನು ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿಸಿದ್ದಾರೆ ಎಂದರು.