ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋರಾಟದ ಭಾಗವಾಗಿ ಚುನಾವಣೆಗೆ ಸ್ಪರ್ಧೆ: ಎಸ್.ಎಂ.ಶರ್ಮಾ

Published 23 ಏಪ್ರಿಲ್ 2024, 16:06 IST
Last Updated 23 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ವಾಡಿ: ‘ನಮ್ಮ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಚುನಾವಣೆಯನ್ನು ಹೋರಾಟದ ಒಂದು ಭಾಗವಾಗಿ ಸ್ವೀಕರಿಸಿದೆ. ಸೋತರೂ ಗೆದ್ದರೂ ಜನರ ಜತೆ ನಿಲ್ಲುತ್ತೇವೆ. ಗೆದ್ದರೆ ಜನರ ಸಮಸ್ಯೆಗಳು ತೆಗೆದುಕೊಂಡು ಹೋರಾಟ ಮಾಡುತ್ತೇವೆ’ ಎಂದು ಪಕ್ಷದ ಅಭ್ಯರ್ಥಿ ಎಸ್.ಎಂ.ಶರ್ಮಾ ಹೇಳಿದರು.

ಹಲಕರ್ಟಿ ಗ್ರಾಮದಲ್ಲಿ ಈಚೆಗೆ ನರೇಗಾ ಕಾರ್ಮಿಕರ ಮಧ್ಯ ಪ್ರಚಾರ ನಡೆಸಿ ಅವರು ಮಾತನಾಡಿದರು.

‘ದುಡಿಯುವ ವರ್ಗದ  ವಿಮೋಚನೆ ಮತ್ತು ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷ ದೇಶದಲ್ಲಿ ಪ್ರಬಲ ಕ್ರಾಂತಿಕಾರಿ ಹೋರಾಟಗಳನ್ನು ಕಟ್ಟುತ್ತಿದೆ. ಚುನಾವಣೆಯನ್ನೂ ಸಹ ನಾವು ಹೋರಾಟದ ಭಾಗವಾಗಿ ಸ್ವೀಕರಿಸಿದ್ದೇವೆ. ಕೂಲಿ ಕಾರ್ಮಿಕರ ಮತಗಳೇ ನನಗೆ ಶ್ರೀರಕ್ಷೆಯಾಗಿವೆ’ ಎಂದರು.

ಪಕ್ಷದ ನಾಯಕರೊಂದಿಗೆ ಚಿತ್ತಾಪುರ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.

ವಾಡಿ ಸಮೀಪದ ಹಲಕರ್ಟಿ ನರೇಗಾ ಕಾರ್ಮಿಕರ ಮಧ್ಯೆ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎಸ್ ಎಂ ಶರ್ಮಾ ಮಾತಾಯಾಚಿಸಿದರು.
ವಾಡಿ ಸಮೀಪದ ಹಲಕರ್ಟಿ ನರೇಗಾ ಕಾರ್ಮಿಕರ ಮಧ್ಯೆ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎಸ್ ಎಂ ಶರ್ಮಾ ಮಾತಾಯಾಚಿಸಿದರು.

ಎಸ್‌ಯುಸಿಐ ಪಕ್ಷದ ಜಿಲ್ಲಾ ನಾಯಕ ವೀರಭದ್ರಪ್ಪ ಆರ್.ಕೆ, ಮುಖಂಡರಾದ ಗೌತಮ ಪರ್ತೂರಕರ, ಶಿವುಕುಮಾರ ಆಂದೋಲಾ, ವೆಂಕಟೇಶ ದೇವದುರ್ಗ, ದತ್ತಾತ್ರೇಯ ಹುಡೆಕ‌ರ, ಸಿದ್ದರಾಜ ಮದ್ರಿ, ಸಿದ್ದಾರ್ಥ ತಿಪ್ಪನೋರ, ಕಾರ್ಮಿಕರಾದ ವೀರೇಶ ನಾಲವಾರ, ಮಾಂತೇಶ ಉಳಗೋಳ, ಸಾಬಣ್ಣಾ ಬೆಳಗುಂಪಿ, ಕರಣಪ್ಪ ಆಂದೋಲ, ಭಾಗಮ್ಮ ಪರ್ತೂರ, ಮಹಾದೇವಿ ಹುಳಗೋಳ, ಶಿವಮ್ಮ ತಳಕಿ, ರಮಾಬಾಯಿ ತಿಪ್ಪನೊರ, ಲಲಿತಾಬಾಯಿ ಮಾವಿನ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT