ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡಿದರು. ಶಿಬಿರದಲ್ಲಿ 41 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು ಕಾರ್ಯಕ್ರಮದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಯತೀಶ್ ವಿ.ಎ, ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ, ಎನ್ಎಸ್ಎಸ್ ಅಧಿಕಾರಿ ಕಲ್ಪನಾ ಸಾಮ್ರಾಟ್, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.