ಹೆಚ್ಚು ಮತ ಚಲಾವಣೆ ಯಾರಿಗೆ ಲಾಭ ತಂದುಕೊಡಲಿದೆ ಎಂಬ ಲೆಕ್ಕಾಚಾರ ಕ್ಷೇತ್ರದಲ್ಲಿ ಶುರುವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿದ್ದ ಡಿ.ಕೆ. ಸುರೇಶ ಅವರಿಗೆ 1,40,490, ಬಿಜೆಪಿಯ ಅಶ್ವತ್ಥನಾರಾಯಣ ಅವರಿಗೆ 32,924 ಮತ ಲಭಿಸಿದ್ದವು. ಆದರೆ, ಈ ಬಾರಿ ಬಿಜೆಪಿ ಜತೆ ಜೆಡಿಎಸ್ ದೋಸ್ತಿ ಮಾಡಿದೆ. ಹಾಗಾಗಿ ರಾಜಕೀಯ ಲೆಕ್ಕಾಚಾರ ಬದಲಾಗಿದೆ.