ವಿಧಾನಸಭೆ ವ್ಯಾಪ್ತಿಯ ಕೆಲವು ಕಡೆ ರೋಡ್ ಶೋ ನಡೆಸಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಚಾರ ನಡೆಸಿದರೆ, ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಪರವಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಯಾವುದೇ ನಾಯಕರು ಬಂದು ಪ್ರಚಾರ ನಡೆಸಲಿಲ್ಲ. ಶಾಸಕ ಟಿ.ಬಿ.ಜಯಚಂದ್ರ ಅವರೇ ಪ್ರಚಾರದ ಹೊಣೆ ಹೊತ್ತಿದ್ದರು.