ಲೋಕಸಭಾ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಸಮಾಜವಾದಿ ಪಕ್ಷ ಒಳಗೊಂಡಿರುವ ‘ಇಂಡಿಯಾ’ ಒಕ್ಕೂಟವು ಮತ್ತಷ್ಟು ಬಲಿಷ್ಠವಾಗಲಿದೆ. ಜನರು ಬಿಜೆಪಿಯ ನಿರ್ಗಮನವನ್ನು ಖಾತರಿಪಡಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ಮನಗಂಡು ಅವರು ಬಿಜೆಪಿಗೆ ಮತ ಹಾಕುತ್ತಿಲ್ಲ.
–ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ
***
ವಿರೋಧ ಪಕ್ಷಗಳು ಆಡಳಿತದಲ್ಲಿದ್ದಾಗ ಬಡವರು ಹಸಿವಿನಿಂದ ಬಳಲಿದರೆ, ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಗುತ್ತಿತ್ತು. ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಬಿಎಸ್ಪಿಯ ಕಾರ್ಯಸೂಚಿಯಲ್ಲಿ ಬಡವರು, ಮಹಿಳೆಯರು ಮತ್ತು ಯುವಕರಿಗೆ ಸ್ಥಾನವಿಲ್ಲ. ಅವರು ಕೇವಲ ಮತಬ್ಯಾಂಕ್ ರಾಜಕಾರಣ ಮತ್ತು ಸಮಾಜವನ್ನು ವಿಭಜಿಸುವ ಪಾಪದ ಕೆಲಸ ಮಾಡುತ್ತಿದ್ದಾರೆ.
–ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ಮುಖ್ಯಮಂತ್ರಿ