ಅಪೌಷ್ಟಿಕತೆ ಮತ್ತು ಬಡತನ ಕುರಿತ ಜಾಗತಿಕ ಸೂಚ್ಯಂಕದಲ್ಲಿ ಭಾರತದ ಸ್ಥಾನ ಎಲ್ಲಿದೆ ಎಂಬುದು ಜನರಿಗೆ ತಿಳಿದಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದು, ಬಿಜೆಪಿಯು ಮತ್ತೆ ಅಧಿಕಾರಕ್ಕೆ ಬಂದರೆ ದೇಶವು 15 ವರ್ಷಗಳಷ್ಟು ಹಿಂದಕ್ಕೆ ಹೋಗಲಿದೆ. ನಿಜವಾದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಆ ಪಕ್ಷವು ‘ವಿಭಜನೆಯ ರಾಜಕಾರಣ’ ಮಾಡುತ್ತಿದೆ. ಜನರು ಬದಲಾವಣೆಗಾಗಿ ಮತದಾನ ಮಾಡಲಿದ್ದಾರೆ. ಕೇಂದ್ರ ಸರ್ಕಾರವು ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ