ಮಹಾರಾಷ್ಟ್ರದ ಮುಂಬೈ ನಾರ್ತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಹಿರಿಯ ವಕೀಲ ಉಜ್ವಲ್ ನಿಕಂ ಅವರನ್ನು ಬಿಜೆಪಿಯು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಸ್ಪರ್ಧಾ ಕಣವು ರಂಗೇರಿದೆ. ಈ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದ ಪೂನಂ ಮಹಾಜನ್ ಅವರಿಗೆ ಟಿಕೆಟ್ ನಿರಾಕರಿಸಿ, ಉಜ್ವಲ್ ಅವರನ್ನು ಅಖಾಡಕ್ಕಿಳಿಸಲಾಗಿದೆ. 2019ರ ಚುನಾವಣೆಯಲ್ಲಿ ಪೂನಂ ಅವರು, 1,30,005 ಮತಗಳ ಅಂತರದಿಂದ ಕಾಂಗ್ರೆಸ್ನ ಪ್ರಿಯಾ ದತ್ತ್ ಅವರನ್ನು ಪರಾಭವಗೊಳಿಸಿದ್ದರು. ಉಜ್ವಲ್ ಅವರು ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಾಗಿ ವಾದಿಸಿದ್ದರು. ಈ ಪ್ರಕರಣದಲ್ಲಿ ಉಗ್ರ ಅಜ್ಮಲ್ ಕಸಬ್ಗೆ ಗಲ್ಲು ಶಿಕ್ಷೆಗೆ ವಿಧಿಸಲಾಗಿತ್ತು. ಅಲ್ಲದೆ 1993ರ ಸರಣಿ ಸ್ಫೋಟ ಮತ್ತು ಬಾಲಿವುಡ್ ಚಿತ್ರ ನಿರ್ಮಾಪಕ ಗುಲ್ಶನ್ ಕುಮಾರ್ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಇವರು ಸರ್ಕಾರದ ಪರ ವಕೀಲರಾಗಿದ್ದರು.