‘ನಿಜ ಸಂಗತಿಯೆಂದರೆ ಬಿಜೆಪಿಯು ಆತಂಕದಲ್ಲಿದೆ. ಪಕ್ಷವು ದಕ್ಷಿಣ ಭಾರತದಲ್ಲಿ ನಿರ್ನಾಮವಾಗಿದ್ದು, ಉತ್ತರ ಭಾರತದಲ್ಲೂ ಹಿನ್ನಡೆ ಅನುಭವಿಸುತ್ತಿರುವುದು ಪ್ರಧಾನಿ ಮತ್ತು ಬಿಜೆಪಿ ಅಧ್ಯಕ್ಷರಿಗೆ ಅರಿವಾಗಿದೆ. ಈ ಚುನಾವಣೆಯಲ್ಲಿ ಸೋಲಿನ ಭೀತಿ ಕಾಡುತ್ತಿದೆ. ಆದ್ದರಿಂದ ಧ್ರುವೀಕರಣವೇ ಅವರ ಮುಂದಿರುವ ಏಕೈಕ ಕಾರ್ಯತಂತ್ರ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಬರೆದಿದ್ದಾರೆ.