ಬಿಜೆಪಿಗೆ ಮತ ಹಾಕಿದರೆ ಗ್ಯಾರಂಟಿಗಳನ್ನು ರದ್ದು ಮಾಡುತ್ತಾರೆ ಎಂಬ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಅಭಿವೃದ್ಧಿ ಕಡೆಗೆ ವಿಶೇಷ ಗಮನ ನೀಡುತ್ತೇವೆ. ಆದರೆ, ಕಾಂಗ್ರೆಸ್ನವರು ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರ ಜಾಸ್ತಿ ಮಾಡಿದರು. ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ನಿಲ್ಲಿಸಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಕೊಟ್ಟಿಲ್ಲ. ಸರ್ಕಾರ ದಿವಾಳಿ ಆಗಿದೆ’ ಎಂದರು.