ವಿಧಾನಸಭಾ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಬೆಂಗಳೂರು ವ್ಯಾಪ್ತಿಯ ಕ್ಷೇತ್ರಗಳಲ್ಲಿ ಹಿಂದೆಯೂ ಬಿಜೆಪಿಗೆ ಬಹುಮತ ಸಿಕ್ಕಿದೆ. ಮೆಟ್ರೊ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಬಿಜೆಪಿ ನೀಡಿದೆ. ಈ ಎಲ್ಲ ಕಾರಣಗಳಿಂದಾಗಿ ಜನರ ಬಳಿ ಹೋಗಿ ಮತ ಯಾಚಿಸುವ ಹಕ್ಕು ಬಿಜೆಪಿಗಿದೆ. ಆದರೆ, ಕಾಂಗ್ರೆಸ್ ಸರ್ಕಾರ ‘ಬ್ರ್ಯಾಂಡ್ ಬೆಂಗಳೂರು’ ಎನ್ನುತ್ತಾ ಕುಡಿಯುವ ನೀರು ಇಲ್ಲದಂತೆ ಮಾಡಿದೆ. ಜನರು ನಗರ ತೊರೆದು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.