ಧಾರವಾಡ: ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಗದಗ ಜಿಲ್ಲೆಯ ಬಾಳೆಹೊಸೂರ–ಶಿರಹಟ್ಟಿಯ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸಾಮೀಜಿ ವಿರುದ್ಧ ಮೂರು ಅಪರಾಧ ಪ್ರಕರಣಗಳು ಇವೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ 2014 ಹಾಗೂ 2015ನೇ ಇಸವಿಯಲ್ಲಿ ಪ್ರಕರಣಗಳು ದಾಖಲಾಗಿವೆ.
ಇವುಗಳಲ್ಲಿ ಕೊಲೆ ಯತ್ನ, ಜೀವ ಬೆದರಿಕೆ, ಜಾತಿನಿಂದನೆ, ಹಲ್ಲೆ, ಹೆಣ್ಣುಮಕ್ಕಳಿಗೆ ಕೈಯಿಂದ ಹೊಡೆದು, ದೂಡಿದ ಆರೋಪಗಳ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಸ್ವಾಮೀಜಿ ಒಟ್ಟು ₹ 9.75 ಕೋಟಿ ಆಸ್ತಿ ಹೊಂದಿದ್ದಾರೆ. ಈ ಪೈಕಿ ಚರಾಸ್ತಿ ಮೌಲ್ಯ ₹1.22 ಕೋಟಿ ಹಾಗೂ ಸ್ಥಿರಾಸ್ತಿ ಮೌಲ್ಯ ₹ 8.52 ಕೋಟಿ. ಒಂದು ಕಾರು, ಒಂದು ಶಾಲಾ ವಾಹನ ಹಾಗೂ ಒಂದು ಟ್ರಾಕ್ಟರ್ ಹೊಂದಿದ್ಧಾರೆ. 7.8 ಕೆ.ಜಿ ಬೆಳ್ಳಿ, 19 ಗ್ರಾಂ ಚಿನ್ನ ಇದೆ. ₹ 39.68 ಲಕ್ಷ ಸಾಲ ಇದೆ ಎಂದು ನಾಮಪತ್ರದ ಜೊತೆಗೆ ನೀಡಿದ ಪ್ರಮಾಣಪತ್ರದಲ್ಲಿ ವಿವರ ಸಲ್ಲಿಸಿದ್ದಾರೆ.