ಸುರಪುರ: ಹುಣಸಗಿ ಪಟ್ಟಣದಲ್ಲಿ ಏ. 28 ರಂದು ನಡೆದ ಬಿಜೆಪಿ ಅಭ್ಯರ್ಥಿ ಪರ ವೇಳೆ ಧರ್ಮಾಧಾರಿತವಾಗಿ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಯತ್ನಾಳ್ ವಿರುದ್ಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಕಾವ್ಯಾರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.