ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಜನಾದೇಶ ನೀಡಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, 'ಕರ್ನಾಟಕದಲ್ಲಿ ಕಾಂಗ್ರೆಸ್ ದೊಡ್ಡ ಜಯ ಗಳಿಸಲಿದೆ. ರಾಜ್ಯ ಸರ್ಕಾರದ ಬಗ್ಗೆ ಜನರು ಸಂತೃಪ್ತಿ ಹೊಂದಿದ್ದಾರೆ' ಎಂದು ಹೇಳಿದ್ದಾರೆ.
'ಹಿಂದಿನ ಚುನಾವಣೆಗೂ ಮುನ್ನ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ. ಮಹಿಳೆಯರ ಒಲವು ಕಾಂಗ್ರೆಸ್ ಪರವಾಗಿದೆ' ಎಂದು ತಿಳಿಸಿದ್ದಾರೆ.
'ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ದೊರಕಿದೆ. ಎಲ್ಲರೂ ಸಂತೋಷವಾಗಿದ್ದಾರೆ. ಎಲ್ಲದಕ್ಕಿಂತಲೂ ಮಹಿಳೆಯರು ಮನೆಯ ಬೆಳಕಾಗಿದ್ದು, ತಮ್ಮ ತಮ್ಮ ಕುಟುಂಬವನ್ನು ನೋಡಿಕೊಳ್ಳುತ್ತಾರೆ. ಅವರೆಲ್ಲರು ಕಾಂಗ್ರೆಸ್ಗೆ ಮತ ಹಾಕಲು ಸಂತೋಷಪಡುತ್ತಾರೆ' ಎಂದು ಹೇಳಿದ್ದಾರೆ.