ಲಿಂಗಸುಗೂರು (ರಾಯಚೂರು ಜಿಲ್ಲೆ): ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ದೂರಿನ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ಪಟ್ಟಣದ ಮನೆಯೊಂದರ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ₹ 500 ಮುಖ ಬೆಲೆಯ ನೋಟಿನ 62 ಬಂಡಲ್ ಜಪ್ತಿ ಮಾಡಿದ್ದಾರೆ.
ಎಸ್ಟಿಎಫ್ ತಂಡದ ಮುಖ್ಯಸ್ಥ ವಿಜಯಕುಮಾರ, ಅಬಕಾರಿ ಇನ್ಸ್ಪೆಕ್ಟರ್ ಪಾಂಡುರಂಗ ನೇತೃತ್ವದಲ್ಲಿ ಗೌಳಿಪುರದ ಚೋಟುಸಾಬ ಉರ್ಫ್ ಚಟ್ಯಾ ಮನೆ ಮೇಲೆ ದಾಳಿ ನಡೆದಾಗ ₹ 500 ಮುಖ ಬೆಲೆಯ ಝರಾಕ್ಷ್ ನೋಟುಗಳು ಪತ್ತೆಯಾಗಿದೆ.