ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರಾಜಕೀಯ ನಷ್ಟ ತುಂಬಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಪ್ರಲ್ಹಾದ್ ಜೋಶಿ

Published 24 ಏಪ್ರಿಲ್ 2024, 10:29 IST
Last Updated 24 ಏಪ್ರಿಲ್ 2024, 10:29 IST
ಅಕ್ಷರ ಗಾತ್ರ

ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನೇಹಾ ಕೊಲೆ ನಡೆದು ನಾಲ್ಕು ಐದು ದಿನಗಳ ನಂತರ ಕಾಂಗ್ರೆಸ್ ಅನುಕಂಪ ತೋರುತ್ತಿದೆ. ಸಿಎಂಗೆ ನೇಹಾ ಕುಟುಂಬದ ಮೇಲೆ ನಿಜವಾದ ಕಾಳಜಿ ಇದ್ದಿದ್ದರೆ, ಪ್ರಕರಣ ನಡೆದ ದಿನವೆ ನೇರವಾಗಿ ನೇಹಾ ತಂದೆ ನಿರಂಜನಯ್ಯ ಅವರಿಗೆ ಕರೆ ಮಾಡಿ ಸಾಂತ್ವಾನ, ಧೈರ್ಯ ನೀದುತ್ತಿದ್ದರು. ಕೊಲೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಮತದಾರರು ತಿರುಗಿ ಬೀಳುವ ಭಯದಿಂದ ಸಾಂತ್ವನದ ನಾಟಕವಾಡಿದ್ದಾರೆ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT