ಚಿತ್ರೀಕರಣದ ಕೊನೆಯ ಹಂತದಲ್ಲಿ ನಟಿ ಮೇಘನಾ ಗಾಂವ್ಕರ್ ಚಿತ್ರತಂಡ ಸೇರಿಕೊಂಡಿದ್ದು, ರವಿಚಂದ್ರನ್ ಜೊತೆಗೆ ತೆರೆಹಂಚಿಕೊಂಡಿದ್ದಾರೆ. ಉಳಿದಂತೆ ದಿಗಂತ್ , ಧನ್ಯಾ ರಾಮ್ಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ.ಎಸ್.ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ಕೆ.ಎಚ್. ದಾಸ್ ಛಾಯಾಚಿತ್ರಗ್ರಹಣ, ಕೆಂಪರಾಜ್ ಸಂಕಲನ ಚಿತ್ರಕ್ಕಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.