‘ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದೊಂದು ವಿಭಿನ್ನ ಹಾರಾರ್ ಚಿತ್ರವಾಗಿದ್ದು, ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ, ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ’ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ.