'ನಮ್ಮ ಪ್ರಚಾರ ಗೀತೆಗಳು ಯಾವಾಗಲೂ ಸಾಮಾನ್ಯ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ. ಈ ಹಾಡು ಜನರ ಭಾವನೆಯನ್ನು ಪ್ರತಿಬಿಂಬಿಸುತ್ತದೆ. ಹಾಡಿನ ಸಾಹಿತ್ಯವು ಇಂದಿನ ದಿನಗಳಲ್ಲಿ ಏನಾಗುತ್ತಿದೆ ಎಂಬುದರ ನೈಜತೆಯನ್ನು ಬಿಂಬಿಸುತ್ತದೆ' ಎಂದು ಪಾಂಡೆ ಹೇಳಿದ್ದಾರೆ.
ಅಲ್ಲದೇ ಭವಿಷ್ಯದಲ್ಲಿ ಜನರು ಎದುರಿಸಬಹುದಾದ ಅಪಾಯಗಳನ್ನು ಈ ಹಾಡು ಚಿತ್ರಿಸುತ್ತದೆ ಎಂದು ಅವರು ಹೇಳಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ.