ಬಿಜೆಪಿಯು ಕಾಶ್ಮೀರ ಜನರ ಕಲ್ಯಾಣಕ್ಕಿಂತ, ಅಲ್ಲಿನ ನೆಲದ ಮೇಲೆ ಹೆಚ್ಚಿನ ಹಿತಾಸಕ್ತಿ ಹೊಂದಿದೆ ಎಂಬ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ ಶಾ, ಪಕ್ಷವು ಕಾಶ್ಮೀರಿಯನ್ನರ ಜೀವನ ಸುಧಾರಣೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರವೇ ಒತ್ತು ನೀಡಿದೆ ವಿನಃ ನೆಲದ ವಿಚಾರಕ್ಕೆ ಅಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
'ನಾನು, ಫಾರೂಕ್ ಅಬ್ದುಲ್ಲಾ( ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ) ಹಾಗೂ ಪಿಡಿಪಿ ಪಕ್ಷವನ್ನು ಕೇಳಲು ಬಯಸುತ್ತೇನೆ, ಯಾರ ಆಡಳಿತದಲ್ಲಿ ಹೆಚ್ಚು ನಕಲಿ ಎನ್ಕೌಂಟರ್ಗಳು ನಡೆದಿವೆ. ಹಾಗೂ ಇಲ್ಲಿನ ಮಕ್ಕಳ ಮೇಲೆ ಗುಂಡು ಹಾರಿಸಿದವರು ಯಾರು?'ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.