‘ಇ.ಡಿ, ಸಿಬಿಐನಂತಹ ಸಂಸ್ಥೆಗಳನ್ನು ತನ್ನ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡಿರುವ ಬಿಜೆಪಿಯು ಪ್ರಜಾಪ್ರಭುತ್ವದ ಮೂಲ ಆಶಯವನ್ನು ಬದಲಿಸಲು ಪ್ರಯತ್ನಿಸುತ್ತಿದೆ. ಒಂದು ರಾಷ್ಟ್ರ, ಒಂದು ಇತಿಹಾಸ ಮತ್ತು ಒಂದು ಭಾಷೆಯನ್ನು ಜನರ ಮೇಲೆ ಹೇರಲು ಮುಂದಾಗಿದೆ’ ಎಂದು ವಾಗ್ದಾಳಿ ನಡೆಸಿದರು.
‘ನಾನು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ಪ್ರತಿದಿನವೂ ಹೋರಾಡುತ್ತೇನೆ. ಅವರೊಂದಿಗೆ ನನಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದೆ. ಬಿಜೆಪಿಯನ್ನು ಟೀಕಿಸಿದ್ದಕ್ಕೆ ಅವರ ನಿಯಂತ್ರಣದಲ್ಲಿರುವ ಕೆಲವು ಮಾಧ್ಯಮಗಳು ದಿನದ 24 ಗಂಟೆಯೂ ನನ್ನ ತೇಜೋವಧೆ ಕೆಲಸ ಮಾಡುತ್ತಿವೆ’ ಎಂದು ದೂರಿದರು.
‘ಬಿಜೆಪಿಯವರು ಹೋದಲ್ಲೆಲ್ಲಾ ಜನರ ನಡುವೆ ಒಡಕು ಮೂಡಿಸಿ ಪರಸ್ಪರ ಕಚ್ಚಾಡುವಂತೆ ಮಾಡುವವರಲ್ಲದೆ, ಸಮಸ್ಯೆ ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದರು.