ಸ್ಥಳೀಯ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿದೆ ಹಾಗೂ ಬಲವಂತವಾಗಿ ಭೂಮಿಯನ್ನು ಕಬಳಿಸಲಾಗುತ್ತಿದೆ ಎಂದು ಆರೋಪಿಸಿ ಸಂದೇಶ್ಖಾಲಿ ಜನರು ತೀವ್ರ ಪ್ರತಿಭಟನೆ ನಡೆಸಿದ್ದರು. ಬಳಿಕ ಘಟನೆ ಕುರಿತು ತನಿಖೆ ನಡೆಸುವಂತೆ ಏ.10ರಂದು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ಆದೇಶ ನೀಡಿತ್ತು. ಅಲ್ಲದೇ ಪ್ರಕರಣದ ಕುರಿತು ಸಂಪೂರ್ಣ ವರದಿಯನ್ನು ಮೇ 2ರಂದು ಸಲ್ಲಿಸುವಂತೆ ನಿರ್ದೇಶಿಸಿತ್ತು.