‘ಇಂಡಿಯಾ ಮೈತ್ರಿಕೂಟದ ಪ್ರಣಾಳಿಕೆಯಲ್ಲಿ, ಮಹಿಳೆಯರಿಗೆ ಶೇ 50 ಮೀಸಲಾತಿ, ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಪ್ರಸ್ತಾಪ ಇದೆ. ಇದು ಬಿಜೆಪಿಯ ಧೈರ್ಯಗೆಡಿಸಿದೆ. ಇಂಡಿಯಾ ಮೈತ್ರಿಕೂಟ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.
‘70 ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಇಂಥ ಅದ್ಭುತ, ಜನಪರವಾದ ಪ್ರಣಾಳಿಕೆ ಬಂದಿದೆ. ಬಡವರ ಪರವಾಗಿ, ನಿರುದ್ಯೋಗಿ ಯುವಕರ ಪರವಾಗಿ ಹಾಗೂ ರೈತರ ಪರವಾಗಿ ಪ್ರಣಾಳಿಕೆ ಮಾತನಾಡುತ್ತಿದೆ. ಇದು ಬಿಜೆಪಿಗೆ ಭಯ ಉಂಟುಮಾಡಿದೆ. ಹೀಗಾಗಿ ಹಿಂದೂ–ಮುಸ್ಲಿಮರ ನಡುವೆ ಉದ್ವಿಗ್ನತೆ ಸೃಷ್ಠಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ಹತಾಶೆಯ ಪ್ರತಿಬಿಂಬ’ ಎಂದು ಅವರು ಹೇಳಿದರು.